ಆದರೆ, ವಘೇಲಾ ಅವರ ಆರೋಪವನ್ನು ತಳ್ಳಿಹಾಕಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ, ‘ವಘೇಲಾ ಅವರ ವಿರುದ್ಧ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ. ಅವರನ್ನು ಪಕ್ಷದಿಂದ ಹೊರಕ್ಕೂ ಹಾಕಿಲ್ಲ. ಅವರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಪಕ್ಷ ತೊರೆದಿರುವುದು ಅವರ ವೈಯಕ್ತಿಕ ನಿರ್ಧಾರ’ ಎಂದಿದ್ದಾರೆ.