ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಕೇಂದ್ರೀಯ ಶಿಕ್ಷಣ ಸಲಹಾ ಮಂಡಳಿ ಮತ್ತು ಎನ್ಸಿಇಆರ್ಟಿಗಳು ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಸಲಹೆಗಳನ್ನು ಕೇಳಿದ್ದವು. ಹಾಗಾಗಿ ಪಠ್ಯಕ್ರಮದಲ್ಲಿ ಪ್ರತಿಯೊಂದು ರಾಜ್ಯದ ಸ್ಥಳೀಯ ನಾಯಕರಿಗೆ ಸಂಬಂಧಿಸಿದಂತೆ ಪಠ್ಯಗಳನ್ನು ಅಳವಡಿಕೊಳ್ಳಬೇಕು. ಆ ಮೂಲಕ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಅವರ ಮಾತೃಭಾಷೆಯಲ್ಲಿಯೇ ರಾಷ್ಟ್ರೀಯತೆಯ ಬಗ್ಗೆ ಬೋಧಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದೇನೆ’ ಎಂದರು.