ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಳ್ಳು ಹೇಳುತ್ತಿದ್ದಾರೆ. ವಿಶ್ವದ ಹಲವು ದೇಶಗಳು ತಮಗೆ ಬೆಂಬಲ ನೀಡುತ್ತವೆ ಎಂದು ಸಂಸತ್ತಿನಲ್ಲಿ ಮಾತನಾಡುತ್ತಿದ್ದಾರೆ. ಭಾರತದ ಉದ್ದೇಶ ಚೀನಾ ಭೂಪ್ರದೇಶವನ್ನು ಆತಿಕ್ರಮಿಸುವುದೇ ಆಗಿದೆ. ಅದು ನೀಡುತ್ತಿರುವ ಪ್ರಚೋದನೆ ಅಂತರರಾಷ್ಟ್ರೀಯ ಸಮುದಾಯದ ಗಮನಕ್ಕೂ ಬಂದಿದ್ದು, ಯಾವ ದೇಶವೂ ಭಾರತಕ್ಕೆ ಬೆಂಬಲ ನೀಡುವುದಿಲ್ಲ’ ಎಂದು ತನ್ನ ವರದಿಯಲ್ಲಿ ಅದು ಉಲ್ಲೇಖಿಸಿದೆ.