ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿ ಇಡುತ್ತೇನೆ’

Last Updated 22 ಜುಲೈ 2017, 20:28 IST
ಅಕ್ಷರ ಗಾತ್ರ

ಬೆಂಗಳೂರು: ‘ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿ ಇಡುತ್ತೇನೆ’ ಎಂದು ಜೆಡಿಎಸ್‌ ಭಿನ್ನಮತೀಯ ಶಾಸಕ ಜಮೀರ್ ಅಹ್ಮದ್ ಖಾನ್ ಸವಾಲು ಹಾಕಿದ್ದಾರೆ.

‘ಚಾಮರಾಜಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲುವುದು ಇರಲಿ ಠೇವಣಿಯೂ ಸಿಗಲ್ಲ’ ಎಂದು ದೇವೇಗೌಡರು ಶುಕ್ರವಾರ ಹೇಳಿದ್ದರು. ಈ ಮಾತಿಗೆ ಶನಿವಾರ ತಿರುಗೇಟು ನೀಡಿದ ಜಮೀರ್‌, ‘ಕ್ಷೇತ್ರದ ಜನರು ನನ್ನನ್ನು ಇಷ್ಟಪಟ್ಟಿದ್ದಾರೆಯೇ ಹೊರತು ದೇವೇಗೌಡರನ್ನು ಅಲ್ಲ. ನನ್ನನ್ನು ಮಗನಂತೆ ಭಾವಿಸಿದ್ದಾರೆ. ನನ್ನ ಮುಖ ನೋಡಿ ಜೆಡಿಎಸ್‌ಗೆ ಮತ ಹಾಕುತ್ತಾರೆ’ ಎಂದಿದ್ದಾರೆ.

‘ನನ್ನ ಕ್ಷೇತ್ರದಲ್ಲಿ ಸಮಾವೇಶ ನಡೆಸಲು ಒಂದು ತಿಂಗಳಿನಿಂದ ದೇವೇಗೌಡರು ಪ್ರಯತ್ನಪಟ್ಟಿದ್ದರು. ಶುಕ್ರವಾರ ನಡೆದ ಜೆಡಿಎಸ್ ಸಮಾವೇಶಕ್ಕೆ ಎಷ್ಟು ಜನ ಬಂದಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಚಾಮರಾಜಪೇಟೆ ಕ್ಷೇತ್ರದಲ್ಲಿ ನನ್ನ ಸ್ವಂತ ಬಲದಿಂದ ಗೆದ್ದಿದ್ದೇನೆ’ ಎಂದರು.

‘ದೇವೇಗೌಡರ ಬಗ್ಗೆ ತುಂಬಾ ಗೌರವವಿದೆ. ಆದರೆ, ಈ ರೀತಿ ರಾಜಕೀಯ ಮಾಡ್ತಾರೆ ಅಂತ ಅಂದ್ಕೊಂಡಿರಲಿಲ್ಲ. ನಾನು ಯಾವತ್ತೂ ಕೀಳುಮಟ್ಟದ ರಾಜಕಾರಣ ಮಾಡಿಲ್ಲ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT