ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೆಂಪೇಗೌಡರು ಬೆಂಗಳೂರಿನಂಥ ಮಹಾನಗರವನ್ನು ಅಭಿವೃದ್ಧಿಪಡಿಸಿ ಜಗತ್ತು ಗುರುತಿಸುವಂತೆ ಮಾಡಿದ್ದಾರೆ. ರೈತರ ಕೃಷಿ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿದ್ದ ಅವರು ಸಾವಿರಾರು ಕೆರೆಗಳನ್ನು ನಿರ್ಮಿಸಿ ನೀರಿನ ಸಮಸ್ಯೆಯನ್ನು ಹೋಗಲಾಡಿಸಿದ್ದಾರೆ. ವಿದ್ಯಾರ್ಥಿಗಳು ಕೆಂಪೇಗೌಡರ ಬಗ್ಗೆ ಹೆಚ್ಚು ತಿಳಿದುಕೊಳ್ಳಬೇಕು ಎಂದರು ಹೇಳಿದರು.