ಕಲಬುರ್ಗಿ: ಇಲ್ಲಿನ ಮಿಜಬಾ ನಗರದಲ್ಲಿ ದುಷ್ಕರ್ಮಿಗಳ ಗುಂಪೊಂದು ಭಾನುವಾರ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ್ದಾರೆ.
ಎಂಎಸ್ ಕೆ ಮಿಲ್ ನಿವಾಸಿ ಮಹಮ್ಮದ್ ಇಲಿಯಾಸ್ ಮೃತಪಟ್ಟವರು.ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಸ್ ವಿಪಿ ವೃತ್ತದಲ್ಲಿ ಶವವಿಟ್ಟು ಪ್ರತಿಭಟನೆ
ಮಹಮ್ಮದ್ ಇಲಿಯಾಸ್ ಕೊಲೆ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಇಲ್ಲಿನ ಎಸ್ ವಿಪಿ ವೃತ್ತದಲ್ಲಿ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ವೃತ್ತದ ಸುತ್ತಲಿನ ಅಂಗಡಿ ಮುಂಗಟ್ಟು ಬಂದ್ ಮಾಡಿಸಿ ಪ್ರತಿಭಟನೆ ನಡೆಸಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣವಾಗಿದೆ.