ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾಲ ವಸೂಲಿಗೆ ಮೊದಲ ಆದ್ಯತೆ’

Last Updated 23 ಜುಲೈ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಬ್ಯಾಂಕ್‌ಗಳಲ್ಲಿ ಬಾಕಿ ಇರುವ ಸಾಲ ವಸೂಲಿ ಮಾಡುವುದೇ ಮೊದಲ ಆದ್ಯತೆ  ಎಂದು ಆರ್‌ಬಿಐ ಡೆಪ್ಯುಟಿ ಗವರ್ನರ್‌ ವಿರಲ್‌ ಆಚಾರ್ಯ ತಿಳಿಸಿದ್ದಾರೆ.

‘ಎನ್‌ಪಿಎ ಗರಿಷ್ಠ ಪ್ರಮಾಣದಲ್ಲಿ ಇರುವುದು ಬ್ಯಾಂಕ್‌ಗಳ ಪ್ರಗತಿಗೆ ಹಿನ್ನಡೆ ಉಂಟುಮಾಡಿದೆ.  ಹೀಗಾಗಿ ತುರ್ತು ಕ್ರಮ ಕೈಗೊಳ್ಳುವ ಮೂಲಕ ಸಾಲ ವಸೂಲು ಮಾಡುವ ಅಗತ್ಯ ಇದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬ್ಯಾಂಕ್‌ಗಳ ಒಟ್ಟು ಎನ್‌ಪಿಎ ₹ 7 ಲಕ್ಷ ಕೋಟಿಗಳ ಗರಿಷ್ಠ ಮಟ್ಟವನ್ನು ತಲುಪಿದೆ.

ನವದಹೆಲಿಯಲ್ಲಿ ನಡೆದ ಆರ್ಥಿಕ ಸಭೆಯಲ್ಲಿ ಮಾತನಾಡಿದ ಅವರು, ‘ನೋಟು ರದ್ದತಿಯಿಂದಾಗಿ ಕಪ್ಪುಹಣದ ಚಲಾವಣೆ ತಗ್ಗಿದೆ. ಆಸ್ತಿಗಳ ಮೇಲೆ ಅಕ್ರಮ ಹಣ ಹೂಡಿಕೆ ಆಗುತ್ತಿಲ್ಲ. ಉಳಿತಾಯವನ್ನು ಮ್ಯೂಚುವಲ್ ಫಂಡ್‌, ವಿಮೆಯಲ್ಲಿ ಹೂಡಿಕೆಯಾಗುತ್ತಿದೆ’ ಎಂದು ತಿಳಿಸಿದ್ದಾರೆ.

‘ಶೇ 80 ಕ್ಕೂ ಹೆಚ್ಚು ಭಾರತೀಯರು ಆರ್ಥಿಕ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡದೇ ಆಸ್ತಿಗಳ ರೂಪದಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಹಣ ಉಳಿತಾಯ ಮಾಡುತ್ತಿದ್ದಾರೆ. ತಿಂಗಳ ವೇತನ ಬರುತ್ತಿದ್ದಂತೆಯೇ ಕಪ್ಪುಹಣ ಕೂಡಿಡಲು ಆರಂಭಿಸುತ್ತಾರೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT