‘ಪ್ರತಿ ವರ್ಷ ಖಾಲಿ ಜಾಗ ಇರುವವರಿಗೆ ಮನೆ ಕಟ್ಟಿಕೊಳ್ಳಲು ಅಂಬೇಡ್ಕರ್ ಯೋಜನೆಯಡಿ ಪುರಸಭೆ ವತಿಯಿಂದ ಸುಮಾರು ₹3.33 ಲಕ್ಷ ಹಣ ನೀಡಲಾಗುತ್ತಿದೆ. ಸುಮಾರು 6 ಕೋಟಿ ಯುವಕರಿಗೆ ಉದ್ಯೋಗ ಕಲ್ಪಿಸಲಾಗಿದೆ. ಸುವರ್ಣ ಗ್ರಾಮ, ಸುವರ್ಣ ಭೂಮಿ ಸೇರಿದಂತೆ ಹತ್ತಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ’ ಎಂದು ಸಾಧನೆ ಗಳನ್ನು ಪಟ್ಟಿ ಮಾಡಿದ ಅವರು, ‘ಕಾಂಗ್ರೆಸ್ ಬಡತನ ನಿರ್ಮೂಲನೆ ಮಾಡುವುದಾಗಿ ಹೇಳುತ್ತ ಬರುತ್ತಿದೆಯೇ ವಿನಾ ಕೆಲಸ ಮಾಡುತ್ತಿಲ್ಲ’ ಎಂದರು.