ರಾಮನಗರ ನಗರಸಭೆಯ ಗುತ್ತಿಗೆ ಪೌರ ಕಾರ್ಮಿಕರಾದ ಸೋಮಶೇಖರ್ (34) ಹಾಗೂ ಚಿನ್ನು (28) ಮೃತರು. ಈ ಇಬ್ಬರು ನಗರದ ವಿವಿಧ ಬಡಾವಣೆಗಳಲ್ಲಿ ಡೆಂಗಿ ನಿಯಂತ್ರಣಕ್ಕಾಗಿ ಫಾಗಿಂಗ್ ಮಾಡಿ ವಾಪಸ್ ನಡೆದುಕೊಂಡು ಹೊರಟಿದ್ದರು. ಆಗ ಮೈಸೂರು ಕಡೆಯಿಂದ ಬಂದ ಕಾರ್ ಡಿಕ್ಕಿ ಹೊಡೆಯಿತು. ಸೋಮಶೇಖರ್ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಮೃತಪಟ್ಟರೆ, ಚಿನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದರು.