ಬೆಂಗಳೂರು: ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವ ಸೆಪ್ಟೆಂಬರ್ 21ರಂದು ಉದ್ಘಾಟನೆ ಆಗಲಿದೆ. ಈ ಬಾರಿಯ ದಸರಾ ಸೆಪ್ಟೆಂಬರ್ 30ರ ಜಂಬೂ ಸವಾರಿಯೊಂದಿಗೆ ಮುಕ್ತಾಯವಾಗಲಿದೆ.
ಸೆ.21ರಂದು ಬೆಳಗ್ಗೆ 9.15ಕ್ಕೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸರಳ ಹಾಗೂ ವಿಜೃಂಭಣೆಯಿಂದ ದಸರಾ ಆಚರಣೆ ನಡೆಯಲಿದೆ. ಈ ವರ್ಷದ ದಸರಾ ಉತ್ಸವಕ್ಕೆ ಸರ್ಕಾರದಿಂದ ₹15 ಕೋಟಿ ಅನುದಾನ ನಿಗದಿ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.