ಕಾರ್ಯಕರ್ತರು ಇಬ್ಬರ ವಿರುದ್ಧವೂ ಘೋಷಣೆ ಕೂಗಿ, ರಾಜೀನಾಮೆಗೆ ಪಟ್ಟು ಹಿಡಿದರು. ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಅಮೀನ್ ಮೋಹಿಸಿನ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ‘ಕರಾವಳಿ ಭಾಗದಲ್ಲಿ ಒಂದು ತಿಂಗಳು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಇಬ್ಬರು ಅಮಾಯಕರ ಕೊಲೆ, 12 ಚೂರಿ ಇರಿತ ಪ್ರಕರಣಗಳು ನಡೆದಿವೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಿಷೇಧಾಜ್ಞೆ ಹೇರಿದ್ದರು. ಇದರ ನಡುವೆಯೂ ಶೋಭಾ, ನಳೀನ್ ಕುಮಾರ್ ಕಟೀಲ್ ಅವರು ಶರತ್ ಕೊಲೆ ಪ್ರಕರಣ ಖಂಡಿಸುವ ನೆಪದಲ್ಲಿ ಬಿ.ಸಿ. ರೋಡ್ನಲ್ಲಿ ಪ್ರತಿಭಟನೆ ನಡೆಸಿ ವಾತಾವರಣ ಮತ್ತಷ್ಟು ಪ್ರಕ್ಷುಬ್ಧವಾಗುವಂತೆ ಮಾಡಿದ್ದರು’ ಎಂದು ಆರೋಪಿಸಿದರು.