ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸದಸ್ಯತ್ವ ಅನರ್ಹಗೊಳ್ಳುವ ತನಕ ಹೋರಾಟ’

ಕಾಣಿಯೂರು ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರ ದುರುಪಯೋಗ
Last Updated 25 ಜುಲೈ 2017, 9:34 IST
ಅಕ್ಷರ ಗಾತ್ರ

ಪುತ್ತೂರು: ‘ತಾಲ್ಲೂಕಿನ ಕಾಣಿಯೂರು ಮತ್ತು ದೋಳ್ಪಾಡಿ ಗ್ರಾಮಗಳನ್ನೊಳಗೊಂಡ ಕಾಣಿಯೂರು ಗ್ರಾಮ ಪಂಚಾ ಯಿತಿಯಲ್ಲಿ ನಡೆಯುತ್ತಿರುವ ಅವ್ಯವಹಾರ, ಅಧಿಕಾರ ದುರುಪಯೋಗ ಮತ್ತು ಕರ್ತವ್ಯ ಲೋಪಕ್ಕೆ ಸಂಬಂಧಿಸಿ ಈಗಾ ಗಲೇ ಸುಮಾರು 6 ಪ್ರಕರಣಗಳು ದಾಖಲಾಗಿ ವಿಚಾರಣಾ ಹಂತದಲ್ಲಿವೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸದಸ್ಯತ್ವ ಅನರ್ಹ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ವಜಾಗೊಳಿಸುವ ತನಕ ಹೋರಾಟ ಮುಂದುವರಿಸುತ್ತೇನೆ’ ಎಂದು ಕಾಣಿಯೂರು ಗ್ರಾಮದ ಮರಕೆರ್ಚಿ ನಿವಾಸಿ ರುಕ್ಮಯ್ಯ ಗೌಡ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಣಿಯೂರು ಗ್ರಾಮ ಪಂಚಾಯಿತಿನಲ್ಲಿ ನಡೆದ ಅವ್ಯವ ಹಾರಕ್ಕೆ ಸಂಬಂಧಿಸಿ ಜಿಲ್ಲಾ ಪಂಚಾಯಿತಿಯಲ್ಲಿ ಇದೇ 15ರಂದು ನಡೆದ ತನಿಖೆಯಲ್ಲಿ ಭಾಗವಹಿಸಿ, ಅಭಿವೃದ್ಧಿ ಅಧಿಕಾರಿ ಗಳ ಕರ್ತವ್ಯ ಲೋಪ ಮತ್ತು ಅಧಿಕಾರ ದುರುಪಯೋಗಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಮುಂದೆ ಸಾಕ್ಷಿ ನುಡಿದಿದ್ದೇನೆ’ ಎಂದರು.

ಕಾಣಿಯೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕಮಲಾಕ್ಷಿ ಬೆದ್ರಂಗಳ ಅವರ ಪತಿ ಲಕ್ಷಣ ಗೌಡ ಅವರು ಪೈಕದ ಮಲೆ ಮೀಸಲು ಅರಣ್ಯದಲ್ಲಿ ಪಂಚಾಯಿತಿ ಅನುಮತಿ ಪಡೆಯದೆ ನಿರ್ಮಿಸಿದ ಆರ್‌ ಸಿಸಿ ಮನೆ, ರೈಲ್ವೆ ಜಮೀನಿನಲ್ಲಿ ಪುಣ್ಚ ತ್ತಾರು ಬೆದ್ರಂಗಳ ಕಾರ್ಯ ಮರಕೆರ್ಜಿಗೆ ಹೋಗುವ ರಸ್ತೆಯನ್ನು ಪಂಚಾಯಿತಿ ರಸ್ತೆ ಎಂದು ಬಿಂಬಿಸಿ ಸರ್ಕಾರ ಹಣ ದುರುಪಯೋಗ ಪಡಿಸಿರುವುದು ಮತ್ತು ಅರಣ್ಯ ಬಫರ್ ಸ್ಥಳದಲ್ಲಿ ಖಾಸಗಿ ವ್ಯಕ್ತಿಯೊಬ್ಬರಿಗೆ ಮನೆ ನಿರ್ಮಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಹಕರಿ ಸಿದ ಪ್ರಕರಣಗಳು  ಲೋಕಾಯುಕ್ತ ತನಿಖೆಯಲ್ಲಿದೆ ಎಂದವರು ಹೇಳಿದರು.

ಈ ಮೂರು ಪ್ರಕರಣಗಳಿಗೆ ಸಂ ಬಂಧಿಸಿ ಲೋಕಾಯುಕ್ತರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪಂಚಾಯಿತಿಗೆ ಭೇಟಿ ನೀಡಿ ಹಗರಣಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ದ್ವೇಷದಿಂದ ಪಂಚಾಯತಿನ ಅಧ್ಯ ಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿ ಕಾರಿ ಮತ್ತು ಸದಸ್ಯರು ತನ್ನ ಸ್ವಾಧೀನ ಮತ್ತು ಅನುಭೋಗದ ಕೊಳವೆಬಾವಿ ಪಂಪನ್ನು ದರೋಡೆ ಮಾಡಿ ದೌರ್ಜ ನ್ಯವೆಸಗಿದ್ದಾರೆ.

ಈ ಬಗ್ಗೆ ತನ್ನ ಪತ್ನಿ ವಿಶಾ ಲಾಕ್ಷಿ ಅವರು ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸುಳ್ಯ ನ್ಯಾಯಾಲ ಯದಲ್ಲಿ ವಿಚಾರಣೆ ನಡೆಯುತ್ತಿದೆ. ಕೊಳವೆ ಬಾವಿಯನ್ನು ವಶಪಡಿಸಿಕೊಂಡ ಪ್ರಕರಣವು ಪುತ್ತೂರು ನ್ಯಾಯಾಲ ಯದಲ್ಲಿ ವಿಚಾರಣಾ ಹಂತದಲ್ಲಿದೆ ಎಂದವರು ತಿಳಿಸಿದರು.

‘ಚುನಾವಣಾ ಆಯೋಗಕ್ಕೂ ಸುಳ್ಳು ಮಾಹಿತಿ’
ಕಾಣಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೀತಮ್ಮ ಖಂಡಿಗ ಹಾಗೂ ಉಪಾಧ್ಯಕ್ಷೆ ಕಮಲಾಕ್ಷಿ ಬೆದ್ರಂಗಳ ಅವರು ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ತಮ್ಮ ವಿದ್ಯಾಭ್ಯಾಸದ ಕುರಿತು ಸುಳ್ಳು ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಿ ಆಯೋಗವನ್ನೇ ಕತ್ತಲೆಯಲ್ಲಿ ಇಟ್ಟಿದ್ದಾರೆ ಎಂದು ರುಕ್ಮಯ್ಯ ಗೌಡ ಆರೋಪಿಸಿದರು.

ಅಧ್ಯಕ್ಷೆ ಸೀತಮ್ಮ ಖಂಡಿಗ ಅವರು ಎಸ್ಸೆಸ್ಸೆಲ್ಸಿ ಉತ್ತೀರ್ಣ ಎಂದು ವಿದ್ಯಾರ್ಹತೆ ಘೋಷಣೆ ಮಾಡಿದ್ದಾರೆ. ಆದರೆ ಅವರು ವಿದ್ಯಾಭ್ಯಾಸ ಮಾಡಿದ ಶಾಲೆಯಲ್ಲಿ ಆ ಬಗ್ಗೆ ಯಾವುದೇ ದಾಖಲೆ ಇಲ್ಲ. ಉಪಾಧ್ಯಕ್ಷೆ ಕಮಲಾಕ್ಷಿ ಬೆದ್ರಂಗಳ ಅವರು ಪ್ರಮಾಣಪತ್ರದಲ್ಲಿ ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ ಎಂದು ಷೋಷಣೆ ಮಾಡಿದ್ದರೂ, ಅವರು ಎಸ್ಸೆಸ್ಸೆಲ್ಸಿಯಲ್ಲಿ ಅನುತ್ತೀರ್ಣವಾಗಿರುವ ಬಗ್ಗೆ ದಾಖಲೆ ಲಭಿಸಿದೆ.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿದ್ಯಾಭ್ಯಾಸದ ಮಾನದಂಡ ಇಲ್ಲದಿದ್ದರೂ, ಈ ಇಬ್ಬರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿರುವುದು ಮಾಹಿತಿ ಹಕ್ಕಿನಿಂದ ದೃಢಪಟ್ಟಿದೆ. ಈ ಬಗ್ಗೆಯೂ ಹೋರಾಟ ಮುಂದುವರಿಸಲಾಗುವುದು ಎಂದವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT