ಮಂಗಳೂರು: ನಗರದ ಕುಟ್ಟಿಪಲ್ಕೆ ಎಂಬಲ್ಲಿ ಸೋಮವಾರ ತಡರಾತ್ರಿ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಕೆಲವು ವರ್ಷಗಳ ಹಿಂದೆ ಕೊಲೆಗೀಡಾಗಿದ್ದ ರೌಡಿ ವಾಮಂಜೂರು ರೋಹಿ ಮಗ ಪವನ್ ರಾಜ್ ಶೆಟ್ಟಿ (22) ಕೊಲೆಯಾದವರು.
ಕುಟ್ಟಿಪಲ್ಕೆಯ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರ ಬಳಿ ನಾಲ್ವರು ದುಷ್ಕರ್ಮಿಗಳ ತಂಡ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದೆ. ಪವನ್ ರಾಜ್ ವಿರುದ್ದ ಹಲವು ಪ್ರಕರಣಗಳಿದ್ದು, ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ ಎಂದು ಪೊಲೀಸರು ತಿಳಿಸಿದ್ದಾರೆ.