‘ಪಟ್ಟಣವಷ್ಟೇ ಅಲ್ಲದೆ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಕೆಲವು ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ತರಿಸಿ, ಅಲ್ಲಿಯ ಶಾಲೆಗಳ ಮುಖ್ಯ ಶಿಕ್ಷಕರು ಬಿಸಿಯೂಟಕ್ಕೆ ವ್ಯವಸ್ಥೆ ಮಾಡುತ್ತಿದ್ದಾರೆ. ಈ ಎರಡು ಶಾಲೆಗಳಲ್ಲಿ ಸಮಯಕ್ಕೆ ಸರಿಯಾಗಿ ಟ್ಯಾಂಕರ್ ನೀರು ಪೂರೈಕೆಯಾಗಿಲ್ಲ. ಇನ್ನು ಮುಂದೆ ಈ ರೀತಿಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು’ ಎಂದು ಬಿಇಒ ಪರಮೇಶ್ವರಪ್ಪ ಹೇಳಿದರು.