ಬೆಂಗಳೂರು: ‘ರಾಜ್ಯ ದಲಿತ ಸಂಘರ್ಷ ಸಮಿತಿಯ ವತಿಯಿಂದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಅಂಗವಾಗಿ ಇದೇ 30ರಂದು ಬಾಗಲಕೋಟೆಯ ನವನಗರದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ರಾಜ್ಯ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ತಿಳಿಸಿದರು.
ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಉದ್ಘಾಟನೆ ನೆರವೇರಿಸಲಿದ್ದಾರೆ. ದಮ್ಮಪದ ಪುಸ್ತಕವನ್ನು ಬಿಡುಗಡೆ ಮಾಡಲಿ ದ್ದೇವೆ’ ಎಂದರು.
‘ಅಂತರ್ಜಾತಿ ವಿವಾಹಕ್ಕೆ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನ ಏರಿಸಬೇಕು. ಪರಿಶಿಷ್ಟ ಜಾತಿಯಲ್ಲಿ 101 ಉಪಜಾತಿಗಳಿದ್ದು, ಪರಿಶಿಷ್ಟ ಪಂಗಡದಲ್ಲಿ 54 ಉಪಜಾತಿಗಳಿವೆ. ಈ ಉಪಜಾತಿಗಳ ನಡುವೆ ಅಂತರ್ಜಾತಿ ವಿವಾಹ ಆಗುವವರಿಗೂ ಪ್ರೋತ್ಸಾಹಧನ ನೀಡಬೇಕು. ಈ ಬಗ್ಗೆ ಸಮಾ ವೇಶದಲ್ಲಿ ಸರ್ಕಾರವನ್ನು ಒತ್ತಾಯಿ ಸುತ್ತೇವೆ’ ಎಂದರು.