ಬೆಂಗಳೂರು: ವಿಧಾನ ಪರಿಷತ್ನ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕ(ಪಿ.ಎ) ವಿನಯ್ ಅಪಹರಣ ಯತ್ನ, ಹಲ್ಲೆ ಪ್ರಕರಣ ಸಂಬಂಧ ರೌಡಿ ಅರವಿಂದ್ ಎಂಬಾತನನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.
43ನೇ ಎಸಿಎಂಎಂ ನ್ಯಾಯಾಲಯದ ಬಾಡಿ ವಾರಂಟ್ ಪಡೆದಿದ್ದ ಮಹಾಲಕ್ಷ್ಮಿ ಲೇಔಟ್ ಠಾಣೆಯ ಪೊಲೀಸರು, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದ ಆರೋಪಿಯನ್ನು ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿದ್ದಾರೆ.
‘ಪ್ರಕರಣದಲ್ಲಿ ಅರವಿಂದ್ ಪಾತ್ರದ ಬಗ್ಗೆ ಅನುಮಾನವಿದೆ. ಹೀಗಾಗಿ ಆತನನ್ನು ವಶಕ್ಕೆ ಪಡೆದಿದ್ದೇವೆ. ಆತ ಹಲವು ಮಾಹಿತಿಯನ್ನು ಬಾಯ್ಬಿಟ್ಟಿದ್ದು, ಅದು ತನಿಖೆಗೆ ಸಹಾಯಕವಾಗಿದೆ’ ಎಂದು ಪೊಲೀಸ್ ಅಧಿಕಾರಿ ಹೇಳಿದರು.
‘ಇತ್ತೀಚೆಗೆ ಎಚ್ಎಎಲ್ ಠಾಣೆಯ ಪೊಲೀಸರು ಪ್ರಕರಣವೊಂದರ ಸಂಬಂಧ ಅರವಿಂದ್ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು’ ಎಂದರು.