ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಬ್ಯಾಂಕ್ ಸಾಲ ಮನ್ನಾ ಒತ್ತಾಯ

Last Updated 27 ಜುಲೈ 2017, 7:12 IST
ಅಕ್ಷರ ಗಾತ್ರ

ಬೈಂದೂರು: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡದ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಬೈಂದೂರು ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಇಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ ಶಾಖೆ ಎದುರು ಪ್ರತಿಭಟನೆ ನಡೆಸಿದರು.

ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಮಾತನಾಡಿ, ‘ರಾಜ್ಯ ಸರ್ಕಾರವು ರೈತರ ನೆರವಿಗೆ ಧಾವಿಸಿದೆ. ರೈತರ ಸಂಕಷ್ಟ ನಿವಾರಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು’ ಎಂದು ಆಗ್ರಹಿಸಿದರು.

ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ಅವರನ್ನು ಬೆಂಬಲಿಸಿ ಮಾತನಾಡಿದರು. ಆ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯದ ವ್ಯವಸ್ಥಾಪಕ ಮತ್ತು  ವಿಶೇಷ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. 

ಯಡ್ತರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗಣೇಶ್ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನಾಗರಾಜ್ ಗಾಣಿಗ, ತಾಲ್ಲೂಕು ಪಂಚಾಯಿತಿ  ಸದಸ್ಯ ಜಗದೀಶ್ ದೇವಾಡಿಗ, ಖಂಬದಕೋಣೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್ ದೇವಾಡಿಗ, ಯುವ ಕಾಂಗ್ರೆಸ್ ಕಾರ್ಯಕರ್ತರಾದ ಬೈಜೂ ಮುದೂರು, ಸನಾತ ಬಳೆಗಾರ್, ಕಿಸಾನ್ ಘಟಕದ ಪ್ರಧಾನ ಕಾರ್ಯದರ್ಶಿ ವೀರಭದ್ರ ಗಾಣಿಗ, ಪ್ರಜ್ವಲ್ ಉಪ್ಪುಂದ, ಸಂತೋಷ ಗೌಡ, ಆಲ್‌ಬೀನ್ ಜಡ್ಕಲ್, ಬೈಂದೂರು ಮಣಿಕಂಠ ದೇವಾಡಿಗ, ಭರತ್ ದೇವಾಡಿಗ, ಮಾಸ್ತಯ್ಯ ಪೂಜಾರಿ, ಕಿರಣ್ ಗಾಣಿಗ, ದಿನೇಶ್ ನಾಯ್ಕ್, ಪ್ರಕಾಶ ಪೂಜಾರಿ, ರಮೇಶ್ ಹೇರೂರು, ವಿಜಯ ಪೂಜಾರಿ, ಮಾಣಿಕ್ಯ ಹೋಬಳಿದಾರ್, ಸುಲ್ತಾನ್ ಬೈಂದೂರು, ಶಬೀರ್ ಬೈಂದೂರು, ಲಕ್ಷ್ಮಣ ಮೊಗವೀರ ಕಿರಿಮಂಜೇಶ್ವರ, ಗಣೇಶ್ ನಾವುಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT