ಕಲಬುರ್ಗಿ: ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಇಲ್ಲಿನ ಅವರ ನಿವಾಸಕ್ಕೆ ಬಂಧುಗಳು, ಅಭಿಮಾನಿಗಳು, ರಾಜಕೀಯ ಮುಖಂಡರು, ಬೆಂಬಲಿಗರು ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ. ಮಧ್ಯಾಹ್ನದ ಬಳಿಕ ವಿಶೇಷ ವಿಮಾನದಲ್ಲಿ ಪಾರ್ಥೀವ ಶರೀರವನ್ನು ಬೀದರ್ ವಿಮಾನ ನಿಲ್ದಾಣದ ಮೂಲಕ ಇಲ್ಲಿಗೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.