ಕೋಲಾರ: ‘ಅಪಘಾತಗಳ ಪ್ರಮಾಣ ತಗ್ಗಿಸಲು ವಾಹನ ಸವಾರರು ಇಲಾಖೆ ಜತೆ ಕೈಜೋಡಿಸಬೇಕು’ ಎಂದು ಹೆಚ್ಚು ವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಸಲಹೆ ನೀಡಿದರು. ಪೊಲೀಸ್ ಇಲಾಖೆಯು ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಲಿಕಾ ಚಾಲನಾ ಪರವಾನಗಿ (ಎಲ್ಎಲ್ಆರ್) ವಿತರಣಾ ಕಾರ್ಯಕ್ರಮದಲ್ಲಿ ಮಾತನಾ ಡಿದ ಅವರು, ‘ಪ್ರತಿಯೊಬ್ಬರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ದರೆ ಅಪಘಾತಗಳ ಸಂಖ್ಯೆ ಕಡಿಮೆ ಯಾಗುತ್ತದೆ’ ಎಂದರು.