ಮೆಟ್ರೊ ನಿಗಮದ ಸ್ವಚ್ಛತೆ, ಭದ್ರತಾ ಸೇವೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಲ್ಲಿ ಹೆಚ್ಚಿನವರು ಕನ್ನಡೇತರರು. ರಾಷ್ಟ್ರದಲ್ಲಿ ಅತಿ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳನ್ನು ಹೊಂದಿರುವ ರಾಜ್ಯದಲ್ಲಿ ಪ್ರತಿಭಾವಂತ ಎಂಜಿನಿಯರ್ಗಳಿದ್ದಾರೆ. ಆದರೂ ನೇಮಕಗೊಂಡಿರುವ ಏಳು ಮುಖ್ಯ ಅಭಿಯಂತರರು ಕನ್ನಡೇತರರು. ಇಲ್ಲಿ ಸರೋಜಿನಿ ಮಹಿಷಿ ವರದಿ ಆಶಯವನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದು, ಈ ಅನ್ಯಭಾಷೆಯ ಅಭಿಯಂತರರನ್ನು ಸೇವೆಯಿಂದ ವಿಮುಕ್ತಿಗೊಳಿಸಬೇಕಾಗುತ್ತದೆ ಎನ್ನಲಾಗಿದೆ.