ಮಹಿಳೆಯರು ನೀಡಿದ ದೂರನ್ನು ನಾಗರಿಕ ಸಮಾಜದ ಸದಸ್ಯರು ಇರುವ ಸಮಿತಿ ಪರಿಶೀಲಿಸದೆ ಯಾರನ್ನೂ ಬಂಧಿಸಬಾರದು ಎಂದು ಕೋರ್ಟ್ ಹೇಳಿದೆ. ದೂರುಗಳ ಪರಿಶೀಲನೆಗಾಗಿ ಪ್ರತಿ ಜಿಲ್ಲೆಯಲ್ಲಿಯೂ ಸಮಿತಿಯನ್ನು ರಚಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಸಮಿತಿಯಲ್ಲಿ ನಾಗರಿಕ ಸಮಾಜದ ಸದಸ್ಯರು, ಅಧಿಕಾರಿಗಳ ಪತ್ನಿಯರು, ನಿವೃತ್ತ ಅಧಿಕಾರಿಗಳು ಮತ್ತು ಕಾನೂನು ಸ್ವಯಂ ಸೇವಕರು ಇರಬೇಕು ಎಂದು ತಿಳಿಸಿದೆ.