ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದ ಇಬ್ಬರ ಸಾವು

Last Updated 2 ಆಗಸ್ಟ್ 2017, 19:46 IST
ಅಕ್ಷರ ಗಾತ್ರ

ಆನೇಕಲ್‌: ಚಾಲಕನ ನಿಯಂತ್ರಣ ತಪ್ಪಿದ್ದ ಕಾರು ಮುಂದೆ ಹೋಗುತ್ತಿದ್ದ ಕಂಟೈನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇನೋವಾ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.


ಬುಧವಾರ ತಾಲ್ಲೂಕಿನ ಯಡವನಹಳ್ಳಿ ಬಳಿ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ವಿಜಯನಗರದ ನಿವಾಸಿಗಳಾದ ಮುಫ್ತಿಯಾರ್(30) ಮತ್ತು ಅಬ್ದುಲ್‌ರೆಹಮಾನ್(45) ಎಂದು ಗುರುತಿಸಲಾಗಿದೆ.


ತಮಿಳುನಾಡಿಗೆ ಹೋಗಿ ವಾಪಸ್  ಬೆಂಗಳೂರಿಗೆ ಬರುತ್ತಿದ್ದಾಗ ಮುಂಜಾನೆ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ತಮಿಳುನಾಡಿನ ಹೊಸೂರಿನಿಂದ ಬೆಂಗಳೂರಿನತ್ತ ಇನೋವಾ ಕಾರಿನಲ್ಲಿ ಬರುತ್ತಿದ್ದರು. ಯಡವನಹಳ್ಳಿ ಗೇಟ್ ಬಳಿ  ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಮುಂದೆ ಹೋಗುತ್ತಿದ್ದ ಕಂಟೈನರ್ ಲಾರಿಗೆ ಹಿಂದಿನಿಂದ ಡಿಕ್ಕಿಹೊಡೆದಿದೆ.


ಸ್ಥಳಕ್ಕೆ ಭೇಟಿ ನೀಡಿದ್ದ ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT