ವಾಹನದ ಮಾಲೀಕರು ಹಾಗೂ ಇತರರ ವಿರುದ್ಧ ಮಹಾರಾಷ್ಟ್ರ ಪ್ರಾಣಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಶ್ರೀಗೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಸಂದರ್ಭ ಠಾಣೆಗೆ ಬಂದ ಪುಣೆಯ ಶಿವಶಂಕರ್ ರಾಜೇಂದ್ರ ಸ್ವಾಮಿ ಹಾಗೂ 11 ಜನ ಗೋರಕ್ಷಕರ ಗುಂಪು, ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರ ಬಳಿ ಕೇಳಿಕೊಂಡರು ಎಂದು ಪೊಲೀಸರೊಬ್ಬರು ತಿಳಿಸಿದ್ದಾರೆ.