ಕೇಂದ್ರ ಮತ್ತು ರಾಜ್ಯಗಳ ನಡುವೆ ಸೌಹಾರ್ದ, ನಂಬಿಕೆ ಅಗತ್ಯ
ನವದೆಹಲಿ, ಆ. 14– ಈ ಸಲದ ಸಾರ್ವತ್ರಿಕ ಚುನಾವಣೆಯಲ್ಲಿ ವಿವಿಧ ರಾಜಕೀಯ ತತ್ವಗಳನ್ನು ಪ್ರತಿಪಾದಿಸುವ ಸರ್ಕಾರಗಳು ಅಧಿಕಾರಕ್ಕೆ ಬಂದವು. ಇದು ಅಸಾಧಾರಣ ಬೆಳವಣಿಗೆ ಏನೂ ಅಲ್ಲ. ಇಂತಹ ಪರಿಸ್ಥಿತಿಯನ್ನು ನಿರೀಕ್ಷಿಸಿ, ಅದಕ್ಕೆ ತಕ್ಕಂತೆ ನಮ್ಮ ಸಂವಿಧಾನವನ್ನು ರೂಪಿಸಲಾಗಿದೆ. ಸಂವಿಧಾನ ಈಗ ಮೊಟ್ಟ ಮೊದಲ ಬಾರಿಗೆ ಪರೀಕ್ಷೆಗೆ ಒಳಗಾಗಿದೆ.