ಲಾಹೋರ್ (ಪಿಟಿಐ): ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ದೂರುಗಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಉಚ್ಚಾಟಿತ ಪ್ರಧಾನಿ ನವಾಜ್ ಷರೀಫ್, ಅವರ ಪುತ್ರರಾದ ಹುಸೇನ್ ಮತ್ತು ಹಸನ್ ಉನ್ನತ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಎದುರು ಶುಕ್ರವಾರ ವಿಚಾರಣೆಗೆ ಹಾಜರಾಗಲಿಲ್ಲ. ಪನಾಮ ಪೇಪರ್ಸ್ ಸೋರಿಕೆಯಿಂದ ಈ ಹಗರಣ ಬಹಿರಂಗವಾಗಿತ್ತು.