₹ ಕೋಟಿ ವೆಚ್ಚದ ಈ ಯೋಜನೆಯಲ್ಲಿ ನಗರದ ನಾಲ್ಕು ಕೆರೆಗಳನ್ನು ಪುನರುಜ್ಜೀವನಗೊಳಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯ ಮೊದಲ ಭಾಗವಾಗಿ ₹ 30 ಲಕ್ಷ ವೆಚ್ಚದಲ್ಲಿ ಹೂಳು ತೆಗೆದು, ಕಳೆಯನ್ನು ತೆರವುಗೊಳಿಸಲಾಗಿದೆ. ಅಲ್ಲದೇ, ಕೆರೆ ನೀರಿನ ಹರಿವು ಬರುವಂತೆ ಕಿರು ಕಾಲುವೆಗಳನ್ನು ನಿರ್ಮಿಸಲಾಗಿದೆ. ಇದರ ಫಲವಾಗಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೆರೆಯು ನೀರಿನಿಂದ ತುಂಬಿ ತುಳುಕುತ್ತಿದೆ.