ಬೆಳ್ಳಿವರ್ಣದ ರಥದಲ್ಲಿ ಶ್ರೀಕೃಷ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಿ ನಗರದ ವೇದಾವತಿ ಬಡಾವಣೆಯಿಂದ ಹೊರಟ ಮೆರವಣಿಗೆ ಪ್ರವಾಸಿ ಮಂದಿರ ವೃತ್ತ, ತಾಲ್ಲೂಕು ಕಚೇರಿ, ಗಾಂಧಿ ವೃತ್ತ, ನೆಹರೂ ವೃತ್ತದ ಮೂಲಕ ಪ್ರಧಾನ ರಸ್ತೆಯಲ್ಲಿ ಸಾಗಿತು. ಭಜನೆ, ಕೋಲಾಟ, ಡೊಳ್ಳು ಕುಣಿತ, ವೀರಗಾಸೆ ಹಾಗೂ ಜನಪದ ನೃತ್ಯಗಳು ನೆರೆದಿದ್ದವರನ್ನು ಆಕರ್ಷಿಸಿದವು.