ಉಡುಪಿ: ಹರ್ನಿಯಾ ಗೆಡ್ಡೆಯಿಂದಾಗಿ ಹೊಟ್ಟೆ ನೋವಿನಿಂದ ಬಳಲುತ್ತಿರುವ ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಭಾನುವಾರ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ.
ಕೆಲ ದಿನಗಳ ಹಿಂದೆ ಸ್ವಾಮೀಜಿ ಅವರನ್ನು ಪರೀಕ್ಷಿಸಿದ್ದ ವೈದ್ಯರು ಹರ್ನಿಯಾ ಇರುವುದನ್ನು ಖಚಿತಪಡಿಸಿದ್ದರು, ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದರು.
‘ಪೂಜಾ ಕೈಂಕರ್ಯಕ್ಕೆ ಅಡಚಣೆಯಾಗಲಿದೆ ಎಂಬ ಕಾರಣಕ್ಕೆ ಸ್ವಾಮೀಜಿ ಅವರು ಒಪ್ಪಿರಲಿಲ್ಲ.
ಶನಿವಾರ ನೋವು ತೀವ್ರವಾದ ಕಾರಣ ವೈದ್ಯರ ಸಲಹೆಯಂತೆ ನಡೆದುಕೊಳ್ಳಲು ಸ್ವಾಮೀಜಿ ನಿರ್ಧರಿಸಿದ್ದಾರೆ. ಬೆಳಿಗ್ಗೆ ಮಹಾಪೂಜೆ ಸಲ್ಲಿಸಿ, ಸ್ವಾಮೀಜಿ ಆಸ್ಪತ್ರೆಗೆ ತೆರಳುವರು. ಸೋಮವಾರ ಮಠಕ್ಕೆ ಮರಳುವರು’ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.