ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಂಸ್ಥೆಗಳು ಸಮಾಜಮುಖಿ ಸೇವೆಯಲ್ಲಿ ತೊಡಗಲಿ’

Last Updated 20 ಆಗಸ್ಟ್ 2017, 9:29 IST
ಅಕ್ಷರ ಗಾತ್ರ

ವಿಜಯಪುರ: ‘ಸಂಘ ಸಂಸ್ಥೆಗಳು ಸಮಾಜಮುಖಿಯಾಗಿ ಕೆಲಸ ಮಾಡುವುದನ್ನು ರೂಢಿಸಿಕೊಳ್ಳಬೇಕು’ ಎಂದು ವೀರಶೈವ ಮಹಿಳಾ ಸಂಘದ ಅಧ್ಯಕ್ಷೆ ಉಷಾ ಪೂರ್ಣಚಂದ್ರ ಹೇಳಿದರು. ಇಲ್ಲಿಗೆ ಸಮೀಪದ ಚಂದೇನಹಳ್ಳಿ ಗೇಟ್ ನಲ್ಲಿರುವ ಸರ್ವೋದಯ ಸೇವಾ ಸಂಸ್ಥೆಯ ಆವರಣದಲ್ಲಿ ವೀರಶೈವ ಮಹಿಳಾ ಸಂಘದಿಂದ ಅಂಧರು, ಅಂಗವಿಕಲರಿಗೆ ಬಟ್ಟೆಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.

‘ಅಂಗವಿಕಲತೆ, ಮಾನಸಿಕ ಅನಾರೋಗ್ಯ ಶಾಪವಲ್ಲ, ದೇಹದಲ್ಲಿನ ಕೆಲವು ನ್ಯೂನತೆಗಳಿಂದಾಗಿ ದೈಹಿಕ ವಿಕಲತೆ, ಮಾನಸಿಕ ರೋಗ ಕಾಣಿಸಿ ಕೊಳ್ಳುತ್ತದೆ. ಇಂತಹ ಮಕ್ಕಳಿಗೆ ಸ್ವಯಂ ಸೇವಾ ಸಂಸ್ಥೆಗಳು, ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿರುವವರು ಸಹಾಯಹಸ್ತ ನೀಡಬೇಕು’ ಎಂದು ಅವರು ಹೇಳಿದರು.

ಉಪಾಧ್ಯಕ್ಷೆ ಶಶಿಕಲಾ ಕಾಂತರಾಜು ಮಾತನಾಡಿ, ‘ಜೀವನದಲ್ಲಿ ಪರೋಪ ಕಾರಕ್ಕಿಂತ ಪುಣ್ಯದ ಕೆಲಸ ಇನ್ನೊಂದಿಲ್ಲ, ಪ್ರತಿಯೊಬ್ಬರು ತಮ್ಮ ಸ್ವಾರ್ಥಕ್ಕಾಗಿ ಚಿಂತನೆ ನಡೆಸದೆ ಸಮಾಜದಲ್ಲಿ ಸಂಕಷ್ಟಗಳಿಗೆ ಸಿಲುಕಿ, ಮಾನಸಿಕವಾಗಿ ನೊಂದಿರುವವರಿಗೆ ಸಾಂತ್ವನ ಹೇಳಬೇಕಾಗಿದೆ’ ಎಂದು ಅವರು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT