ಒಟ್ಟು ಒಟ್ಟು 8 ಹಂದಿ ಗೂಡುಗಳನ್ನು ನಾಶಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಹಂದಿ ಸಾಕಣೆ ಮಾಡಿದಲ್ಲಿ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಸಿದರು. 2015ರಲ್ಲಿ ಲೋಕಾಯುಕ್ತ ಭಾಸ್ಕರ್ ರಾವ್ ನಗರಕ್ಕೆ ಭೇಟಿ ನೀಡಿದ್ದ ವೇಳೆ ಅರ್ಕಾವತಿ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಂದಿ ಸಾಕಣೆಯಿಂದ ಇಲ್ಲಿನ ಜನರಿಗೆ ಆಗುತ್ತಿರುವ ತೊಂದರೆಗಳ ಕುರಿತು ದೂರು ನೀಡಿದ್ದರು. ಈ ಕುರಿತು ಕ್ರಮ ಜರುಗಿಸುವಂತೆ ಲೋಕಾಯುಕ್ತರು ನಗಸಭೆಯ ಅಧಿಕಾರಿಗಳಿಗೆ ಸೂಚಿಸಿದ್ದರು.