ಬೆಂಗಳೂರು: ‘ಶಿವರಾಮ ಕಾರಂತ ಬಡಾವಣೆ ಜಮೀನು ಅಕ್ರಮವಾಗಿ ಡಿನೋಟಿಫೈ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ಮಂಗಳವಾರ (ಆ.21) ವಿಚಾರಣೆ ನಡೆಸಲಿದೆ.
‘ನನ್ನ ವಿರುದ್ಧ ಎಸಿಬಿ ದಾಖಲಿಸಿರುವ ಎರಡು ಎಫ್ಐಆರ್ಗಳನ್ನು ರದ್ದುಗೊಳಿಸಬೇಕು’ ಎಂಬುದು ಯಡಿಯೂರಪ್ಪ ಅವರ ಕೋರಿಕೆ. ನ್ಯಾಯಮೂರ್ತಿ ಅರವಿಂದ ಕುಮಾರ್ ಅವರ ಏಕಸದಸ್ಯ ನ್ಯಾಯಪೀಠ ಈ ಅರ್ಜಿಗಳ ವಿಚಾರಣೆ ನಡೆಸಲಿದೆ.