ಕೃಷಿ ಇಲಾಖೆಯಿಂದ ಕೃಷಿಭಾಗ್ಯ, ರಿಯಾಯ್ತಿ ದರದಲ್ಲಿ ಪ್ಲಾಸ್ಟಿಕ್ ತಾಡಪಾಲು, ತುಂತುರು ನೀರಾವರಿ ಸಾಮಗ್ರಿ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಭದ್ರಾ ಮೇಲ್ದಂಡೆ ಯೋಜನೆಯಡಿ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, 20 ಸಾವಿರ ಹೆಕ್ಟೇರ್ಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. 157 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಮೋದನೆ ಹಂತದಲ್ಲಿದೆ ಎಂದು ಶಾಸಕರು ಸ್ಪಷ್ಟಪಡಿಸಿದರು.