ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆಗೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಸಮಾವೇಶದಿಂದ ದೂರ ಉಳಿದ ಬಿಜೆಪಿ ಮುಖಂಡರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ‘ನಿಮಗೆ ಪಕ್ಷ ಮುಖ್ಯವೋ, ಧರ್ಮ ಮುಖ್ಯವೋ ಉತ್ತರ ಕೊಡಿ’ ಎಂದು ಒತ್ತಾಯಿಸಿದರು.
‘ಸಮಾಜದವರ ಸಂಕಷ್ಟಕ್ಕೆ ಬಾರದಿರುವ ನೀವು, ಚುನಾವಣೆಗಳಲ್ಲಿ ಲಿಂಗಾಯತರ ಕೋಟಾದಲ್ಲಿ ಏಕೆ ಟಿಕೆಟ್ ತೆಗೆದುಕೊಳ್ಳುತ್ತೀರಿ’ ಎಂದೂ ಪ್ರಶ್ನಿಸಿದರು.