‘ಮಲ ಎತ್ತಲು ಒತ್ತಾಯಿಸಿದ್ದನ್ನು ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಆನಂತರ ಅವರು ದಲಿತ ಸಮುದಾಯದ ಸದಸ್ಯರೊಂದಿಗೆ ಠಾಣೆಗೆ ಬಂದು ಸಿಂಗ್ ವಿರುದ್ಧ ದೂರು ನೀಡಿದ್ದಾರೆ’ ಎಂದು ಖಾನ್ ಹೇಳಿದ್ದಾರೆ. ಕಾನೂನುಬಾಹಿರವಾಗಿ ಕಡ್ಡಾಯ ದುಡಿಮೆ, ಶಾಂತಿ ಕದಡುವ ಸಲುವಾಗಿ ಉದ್ದೇಶಪೂರ್ವಕ ಅವಮಾನ, ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಡಿ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆತ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.