ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ತಂಗ ತಮಿಳ್ ಸೆಲ್ವಂ ‘ಫೆಬ್ರುವರಿ 18ರಂದು ನಡೆದಿದ್ದ ವಿಶ್ವಾಸಮತ ಯಾಚನೆಯಲ್ಲಿ ನಾವು ಪಳನಿಸ್ವಾಮಿ ಅವರಿಗೆ ಬೆಂಬಲ ನೀಡಿದ್ದೆವು. ಆದರೆ ಒ.ಪನ್ನೀರ್ಸೆಲ್ವಂ ಮತ್ತು ಅವರ ಬಣದ ಶಾಸಕರು ಪಳನಿಸ್ವಾಮಿ ವಿರುದ್ಧ ಮತ ಚಲಾಯಿಸಿದ್ದರು. ಆದರೆ ಪಳನಿಸ್ವಾಮಿ ಈಗ ಪನ್ನೀರ್ಸೆಲ್ವಂ ಜತೆ ಕೈಜೋಡಿಸಿದ್ದಾರೆ. ಈ ಮೂಲಕ ನಮ್ಮ ವಿಶ್ವಾಸ ಕಳೆದುಕೊಂಡಿರುವ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡಿ’ ಎಂದು ಒತ್ತಾಯಿಸಿದ್ದಾರೆ.