ಉಡುಪಿ: ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರು ಚೇತರಿಸಿಕೊಂಡಿದ್ದು, ಮಂಗಳವಾರ ಸಂಜೆ ಮಠಕ್ಕೆ ಮರಳಿದರು.
ಸ್ವಾಮೀಜಿ ಅವರು ಶಸ್ತ್ರಚಿಕಿತ್ಸೆಯ ನಂತರವೂ ಲವಲವಿಕೆಯಿಂದ ಇದ್ದಾರೆ. ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಆದರೂ ಅವರು ಬುಧವಾರದಿಂದ ಪೂಜಾ ಕೈಂಕರ್ಯಗಳಲ್ಲಿ ತೊಡಗಿಸಿಕೊಳ್ಳುವರು. ಮಹಾಪೂಜೆಯನ್ನು ಅವರೇ ನೆರವೇರಿಸುವರು ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.