ರಾಜ್ಯ ಸರ್ಕಾರದ ‘ಬಡ್ತಿ ಮೀಸಲಾತಿ ಕಾಯ್ದೆ 2002’ರನ್ನು ಇದೇ ವರ್ಷದ ಫೆಬ್ರುವರಿ 9ರಂದು ರದ್ದು ಪಡಿಸಿದ್ದ ಸುಪ್ರೀಂಕೋರ್ಟ್, ನೌಕರರ ಸೇವಾ ಜ್ಯೇಷ್ಠತಾ ಪಟ್ಟಿ ಪರಿಷ್ಕರಿಸಬೇಕು ಹಾಗೂ ಬಡ್ತಿಯಿಂದ ವಂಚಿತರಾದವರಿಗೆ ಆಗಸ್ಟ್ 9ರೊಳಗೆ ಮುಂಬಡ್ತಿ ನೀಡಬೇಕು ಎಂದು ಆದೇಶಿಸಿದ್ದರಿಂದ ಪರಿಶಿಷ್ಟ ಜಾತಿ, ಪಂಗಡಗಳ ನೌಕರರು ಹಿಂಬಡ್ತಿ ಭೀತಿ ಎದುರಿಸುತ್ತಿದ್ದರು. ರಾಜ್ಯ ಸರ್ಕಾರ ಇದೇ 8ರಂದು ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಹೊರಡಿಸುವ ತೀರ್ಮಾನ ಕೈಗೊಂಡಿತ್ತು. ಸುಗ್ರೀವಾಜ್ಞೆಗೆ ಅನುಮೋದನೆ ನೀಡುವಂತೆ ಕೋರಿ, ಕಡತವನ್ನು ಇದೇ 9ರಂದು ರಾಜ್ಯಪಾಲರಿಗೆ ಸಲ್ಲಿಸಲಾಗಿತ್ತು.