‘ಅನ್ಯ ರಾಜ್ಯಗಳಿಂದ ಇಲ್ಲಿಗೆ ಬಂದು ವ್ಯಾಪಾರ–ವ್ಯವಹಾರಲ್ಲಿ ತೊಡಗಿರುವುದು ಸ್ವಾಗತಾರ್ಹ. ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಿದೆ. ಎಲ್ಲರೂ ಕನ್ನಡದಲ್ಲೇ ವ್ಯವಹರಿಸಬೇಕು. ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂಬ ಕಾನೂನು ಇದೆ. ಆದರೆ, ಬಹುತೇಕ ಮಳಿಗೆಗಳು, ಮಾಲ್ಗಳು ಕನ್ನಡವನ್ನು ಕಡೆಗಣಿಸಿವೆ’ ಎಂದು ವೇದಿಕೆಯ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ದೂರಿದರು.