<p>ಕವಿ ಎಚ್.ಎಸ್. ವೆಂಕಟೇಶಮೂರ್ತಿ ಅವರ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ‘ಹಸಿರು ರಿಬ್ಬನ್’ ಸಿನಿಮಾದ ಪಾತ್ರಧಾರಿಗಳ ಪಟ್ಟಿ ಅಂತಿಮಗೊಂಡಿದ್ದು, ನಾಯಕಿಯರನ್ನು ಸಹ ಆಯ್ಕೆ ಮಾಡಲಾಗಿದೆ.</p>.<p>ಶಿವಮೊಗ್ಗದ ರಂಗಭೂಮಿ ಕಲಾವಿದೆ ಸುಪ್ರೀಯಾ ಎಸ್.ರಾವ್ ಹಾಗೂ ಪಲ್ಲವಿ ಅವರನ್ನು ಆಯ್ಕೆಮಾಡಲಾಗಿದೆ.</p>.<p>ಪಲ್ಲವಿ ಅವರು ಮೌರ್ಯ, ಮ್ಯಾಜಿಕ್ ಅಜ್ಜಿ ಸೇರಿದಂತೆ ನಾನಾ ಸಿನಿಮಾಗಳಲ್ಲಿ ನಟಿಸಿದ್ದು, ಸುಪ್ರೀಯಾ ಅವರು ಈ ಸಿನಿಮಾದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಲಿದ್ದಾರೆ.</p>.<p>ನಿಖಿಲ್ ಮಂಜು ನಾಯಕರಾಗಿ ನಟಿಸುತ್ತಿದ್ದು, ಗಿರಿಜಾ ಲೋಕೇಶ್ ತಾಯಿ ಪಾತ್ರ ನಿರ್ವಹಿಸಲಿದ್ದಾರೆ. ಬೇಬಿ ಋತ್ವಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.</p>.<p>ಅಂದುಕೊಂಡಂತೆ ಎಲ್ಲಾ ನಡೆದರೆ ಇದೇ ತಿಂಗಳಿಂದ ಶೂಟಿಂಗ್ ಆರಂಭವಾಗಲಿದ್ದು, ಕನಕಪುರ ಹಾಗೂ ಮಂಡ್ಯದ ಸುತ್ತಮುತ್ತಲೂ ಶೂಟಿಂಗ್ ನಡೆಸುವ ಯೋಜನೆ ಹಾಕಿಕೊಂಡಿದೆ ಚಿತ್ರತಂಡ.</p>.<p>ಹಸಿರು ಕನಸೊಂದರ ಬೆನ್ನಟ್ಟಿದ ಅಮಾಯಕ ಕುಟುಂಬವೊಂದರ ತಳಮಳ ಈ ಕಥನದಲ್ಲಿದೆ. ಎರಡು ಕುಟುಂಬಗಳ ಸಂಬಂಧ, ಬಿಕ್ಕಟ್ಟನ್ನು ನೋಡುಗರಿಗೆ ಚೊಕ್ಕಟವಾಗಿ ಹೇಳುವ ಪ್ರಯತ್ನದಲ್ಲಿದೆ. </p>.<p>ಉಪಾಸನಾ ಮೋಹನ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಪಿ.ವಿ.ಆರ್.ಸ್ವಾಮಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಆರ್.ಎಸ್. ಕುಮಾರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಕವಿ ಎಚ್.ಎಸ್. ವೆಂಕಟೇಶಮೂರ್ತಿ ಅವರ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ‘ಹಸಿರು ರಿಬ್ಬನ್’ ಸಿನಿಮಾದ ಪಾತ್ರಧಾರಿಗಳ ಪಟ್ಟಿ ಅಂತಿಮಗೊಂಡಿದ್ದು, ನಾಯಕಿಯರನ್ನು ಸಹ ಆಯ್ಕೆ ಮಾಡಲಾಗಿದೆ.</p>.<p>ಶಿವಮೊಗ್ಗದ ರಂಗಭೂಮಿ ಕಲಾವಿದೆ ಸುಪ್ರೀಯಾ ಎಸ್.ರಾವ್ ಹಾಗೂ ಪಲ್ಲವಿ ಅವರನ್ನು ಆಯ್ಕೆಮಾಡಲಾಗಿದೆ.</p>.<p>ಪಲ್ಲವಿ ಅವರು ಮೌರ್ಯ, ಮ್ಯಾಜಿಕ್ ಅಜ್ಜಿ ಸೇರಿದಂತೆ ನಾನಾ ಸಿನಿಮಾಗಳಲ್ಲಿ ನಟಿಸಿದ್ದು, ಸುಪ್ರೀಯಾ ಅವರು ಈ ಸಿನಿಮಾದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಲಿದ್ದಾರೆ.</p>.<p>ನಿಖಿಲ್ ಮಂಜು ನಾಯಕರಾಗಿ ನಟಿಸುತ್ತಿದ್ದು, ಗಿರಿಜಾ ಲೋಕೇಶ್ ತಾಯಿ ಪಾತ್ರ ನಿರ್ವಹಿಸಲಿದ್ದಾರೆ. ಬೇಬಿ ಋತ್ವಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.</p>.<p>ಅಂದುಕೊಂಡಂತೆ ಎಲ್ಲಾ ನಡೆದರೆ ಇದೇ ತಿಂಗಳಿಂದ ಶೂಟಿಂಗ್ ಆರಂಭವಾಗಲಿದ್ದು, ಕನಕಪುರ ಹಾಗೂ ಮಂಡ್ಯದ ಸುತ್ತಮುತ್ತಲೂ ಶೂಟಿಂಗ್ ನಡೆಸುವ ಯೋಜನೆ ಹಾಕಿಕೊಂಡಿದೆ ಚಿತ್ರತಂಡ.</p>.<p>ಹಸಿರು ಕನಸೊಂದರ ಬೆನ್ನಟ್ಟಿದ ಅಮಾಯಕ ಕುಟುಂಬವೊಂದರ ತಳಮಳ ಈ ಕಥನದಲ್ಲಿದೆ. ಎರಡು ಕುಟುಂಬಗಳ ಸಂಬಂಧ, ಬಿಕ್ಕಟ್ಟನ್ನು ನೋಡುಗರಿಗೆ ಚೊಕ್ಕಟವಾಗಿ ಹೇಳುವ ಪ್ರಯತ್ನದಲ್ಲಿದೆ. </p>.<p>ಉಪಾಸನಾ ಮೋಹನ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಪಿ.ವಿ.ಆರ್.ಸ್ವಾಮಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಆರ್.ಎಸ್. ಕುಮಾರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>