‘ಮಂಡ್ಯದ ಸಂತೆ ಕೆಸಲಗೆರೆಯ ಪುಟ್ಟಯ್ಯ ಎಂಬುವರ ಪುತ್ರಿ ರಮ್ಯಾ, ಚಾಮರಾಜನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿ. ಇವರ ಚಿಕ್ಕಪ್ಪ ಸತೀಶ್ ಎಂಬುವರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕರಾಗಿ ತುರುವೇಕರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ತಿಂಗಳ ಹಿಂದೆ ಕರೆ ಮಾಡಿದ ವ್ಯಕ್ತಿ ಚಿಕ್ಕಪ್ಪನಂತೆ ಪರಿಚಯ ಮಾಡಿಕೊಂಡು ಕುಶಲೋಪರಿ ವಿಚಾರಿಸಿದ್ದಾರೆ. ಧ್ವನಿ ಹೋಲಿಕೆ ಇದುದ್ದರಿಂದ ಚಿಕ್ಕಪ್ಪನೆಂದು ಯುವತಿ ನಂಬಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.