‘ಅಸ್ಸಾಂನಲ್ಲಿ ಮಳೆ ಹಾನಿಯಿಂದ ಜನರು ತತ್ತರಿಸಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿಗೆ ಭೇಟಿ ನೀಡಿ, ಸಾಂತ್ವನ ಹೇಳಲಿಲ್ಲ. ಸಂತ್ರಸ್ತರ ಜತೆ ಮೋದಿ ಇರುವ ಫೋಟೋ ತೋರಿಸಿದರೆ ₹ 25,000 ಬಹುಮಾನ ನೀಡುತ್ತೇನೆ’ ಎಂದು ರಮ್ಯಾ ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಪ್ರಧಾನಮಂತ್ರಿಗಳ ಬಗ್ಗೆ ಈ ರೀತಿ ಟ್ವೀಟ್ ಮಾಡಿರುವುದು ಅರ್ಥ ಹೀನ. ಹೀಗಾಗಿ ರಮ್ಯಾ ಅವರಿಗೆ ಮಕ್ಕಳ ಆಟಿಕೆ ಸಾಮಾನು, ಒಂದು ಜತೆ ಡ್ರೆಸ್ ಅನ್ನು ಪೋಸ್ಟ್ ಮೂಲಕ ರವಾನೆ ಮಾಡುವ ಮೂಲಕ ಹಬ್ಬದ ಬಾಗಿನ ನೀಡುತ್ತಿದ್ದೇವೆ ಎಂದು ಬಿಜೆಪಿ ಮುಖಂಡರು ಹೇಳಿದರು.