ಮಧ್ಯಾಹ್ನ 2 ಗಂಟೆ ವೇಳೆಗೆ ಪೊಲೀಸರೊಂದಿಗೆ ಸ್ಥಳಕ್ಕೆ ಬಂದ ಪಾಲಿಕೆ ಆಯುಕ್ತ ಎಂ.ಕೆ.ನಲ್ವಡಿ ಅವರ ಜತೆ ವರ್ತಕರು ವಾಗ್ವಾದ ನಡೆಸಿದರು. ಸಿಬ್ಬಂದಿಯನ್ನು ತಡೆದರು. ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದರು. ಅವರ ಮಾತನ್ನು ಪರಿಗಣಿಸದೆ, ಪೊಲೀಸರ ನೆರವಿನೊಂದಿಗೆ ಮೂರ್ತಿಗಳನ್ನು ವಶಕ್ಕೆ ಪಡೆಯಲಾಯಿತು.