‘ಕೆರೆಯನ್ನು ಒತ್ತುವರಿ ಮಾಡುವ ಸಲುವಾಗಿ ತ್ಯಾಜ್ಯ ಸುರಿಯಲಾಗುತ್ತಿದೆ. ಈ ವಿಚಾರವನ್ನು ಗಮನಕ್ಕೆ ತಂದಿದ್ದರೂ ಕಂದಾಯ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳು ಈ ಕೃತ್ಯವನ್ನು ತಡೆಯಲು ಕ್ರಮ ಕೈಗೊಂಡಿಲ್ಲ’ ಎಂದು ಗ್ರಾಮಸ್ಥರು ದೂರಿದ್ದಾರೆ.
‘ಗ್ರಾಮದ ಹೊರ ವಲಯದಲ್ಲಿ ಖಾಸಗಿ ಬಡಾವಣೆಗಳು ನಿರ್ಮಾಣವಾಗುತ್ತಿವೆ. ಅಲ್ಲಿ ಕಾಮಗಾರಿ ನಡೆಸುವಾಗ ಸಿಕ್ಕಿದ ಭಾರಿ ಗಾತ್ರದ ಬಂಡೆ ಕಲ್ಲುಗಳನ್ನು ತಂದು ಕೆರೆ ಅಂಗಳದಲ್ಲಿ ಹಾಕಿದ್ದಾರೆ. ಕೆರೆಯ ಮೀಸಲು ಪ್ರದೇಶವನ್ನು ಒತ್ತುವರಿ ಮಾಡಲಾಗಿದೆ. ಇದನ್ನು ಈ ಹಂತದಲ್ಲೇ ತಡೆಯದಿದ್ದರೆ ಕೆರೆ ಕ್ರಮೇಣ ಕಣ್ಮರೆ ಆಗಲಿದೆ’ ಎಂದು ಗ್ರಾಮಸ್ಥರೊಬ್ಬರು ಆತಂಕ ವ್ಯಕ್ತಪಡಿಸಿದರು.