‘ಕ್ರಿಕೆಟ್ ಆಡಳಿತ ಸುಧಾರಣೆಗಾಗಿ ಲೋಧಾ ಸಮಿತಿ ಶಿಫಾರಸುಗಳನ್ನು ಜಾರಿ ಮಾಡಲು ನಿರ್ದೇಶಿಸಲಾಗಿತ್ತು. ಆದರೆ ನಿಗದಿಪಡಿಸಿದ ಅವಧಿಯೊಳಗೆ ಶಿಫಾರಸುಗಳನ್ನು ಜಾರಿ ಮಾಡಿಲ್ಲ.ಆದ್ದರಿಂದ ಮೂವರು ಉನ್ನತ ಪದಾಧಿಕಾರಿಗಳಿಗೆ ಷೋಕಾಸ್ ನೋಟಿಸ್ ನೀಡಲಾಗುವುದು’ ಎಂದು ಪೀಠವು ತಿಳಿಸಿದೆ. ಅನರ್ಹ ಮತ್ತು ಪದಚ್ಯುತ ಪದಾಧಿಕಾರಿಗಳಿಗೆ ಬಿಸಿಸಿಐ ಸಾಮಾನ್ಯ ಸಭೆಗಳಲ್ಲಿ ಭಾಗವಹಿಸಲು ಅವಕಾಶ ನೀಡಿದ್ದನ್ನು ವಿರೋಧಿಸಿ ಬಿಹಾರ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಆದಿತ್ಯಕುಮಾರ್ ವರ್ಮಾ ಅವರು ದಾಖಲಿಸಿರುವ ದೂರಿನ ವಿಚಾರಣೆ ನಡೆಸಲಾಗುವುದು. ಈ ವಿಷಯದ ಬಗ್ಗೆಯೂ ಪದಾಧಿಕಾರಿಗಳು ವಿವರಣೆ ನೀಡಬೇಕು ಎಂದು ನ್ಯಾಯಪೀಠವು ನಿರ್ದೇಶನ ನೀಡಿದೆ.