‘ಶನಿವಾರ ರಾತ್ರಿ ಸುರಿದ ಮಳೆಯಿಂದ ತಾಲ್ಲೂಕಿನ ತುಮಕೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನೀರು ನಿಂತಿದೆ. ಅಲ್ಲದೆ ಜಮೀನುಗಳ ತಗ್ಗು ಪ್ರದೇಶದಲ್ಲಿ ನೀರು ನಿಂತಿದ್ದು, ಮಳೆ ಜೊತೆಗೆ ಮೋಡ ಕವಿದ ವಾತಾವರಣದಿಂದ ತುಂಪು ಹೆಚ್ಚಾಗಿ ಹತ್ತಿ, ಮೆಣಸಿನಕಾಯಿ ಬೆಳೆಗೆ ರೋಗದ ಭೀತಿ ಉಂಟಾಗಿದೆ’ ಎಂದು ರೈತ ನಾಗಪ್ಪ ತಿಳಿಸಿದರು.