ಗ್ರಾಮದಲ್ಲಿ ನಿರ್ಮಿಸಿರುವ ಸಿಮೆಂಟ್ ರಸ್ತೆಗಳು ಹಾಳಾಗಿದ್ದು, ಗುಂಡಿ ಬಿದ್ದ ಕಾರಣ ಸಂಚಾರಕ್ಕೆ ತೀವ್ರ ತೊಂದರೆ ಆಗಿದೆ. ಈ ಬಗ್ಗೆ ಚುನಾಯಿತ ಪ್ರತಿನಿಧಿ, ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಶಿವಾಜಿರಾವ, ರಾಜಾರಾಮ, ವೆಂಕಟರಾವ ಆರೋಪಿಸಿದ್ದಾರೆ.ಇಲ್ಲಿನ ಸರ್ಕಾರಿ ಶಾಲೆ ಶಿಕ್ಷಕರು ಸಮರ್ಪಕ ಸಮಯ ಪಾಲಿಸದ ಕಾರಣ ಮಕ್ಕಳ ಸಂಖ್ಯೆ ಜೊತೆ ಶಿಕ್ಷಣದ ಗುಣಮಟ್ಟವೂ ಕುಸಿದಿದ್ದು, ಸುಧಾರಣೆ ಆಗಬೇಕು. ಜೊತೆಗೆ ಪಿಯುಸಿ, ಪದವಿ ಕಾಲೇಜು ಶಿಕ್ಷಣಕ್ಕಾಗಿ ಭಾಲ್ಕಿಗೆ ತೆರಳುವುದಕ್ಕಾಗಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂಬುದು ಪಾಲಕರ ಒತ್ತಾಸೆ.