ಪ್ರತಿಭಟನಾ ಮೆರವಣಿಗೆ ಮೂಲಕ ಇಲ್ಲಿನ ಬಸವೇಶ್ವರ ವೃತ್ತಕ್ಕೆ ಬಂದ ಎಬಿವಿಪಿ ಕಾರ್ಯಕರ್ತರು, ವಿಶ್ವವಿದ್ಯಾಲಯವು ಫಲಿತಾಂಶ, ಮೌಲ್ಯಮಾಪನ, ಮರು ಮೌಲ್ಯಮಾಪನ ಹಾಗೂ ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಪದೇ ಪದೇ ತನ್ನ ನಿಲುವು ಬದಲಾಯಿಸುತ್ತಾ ಅವೈಜ್ಞಾನಿಕತೆ ಮೆರೆಯುತ್ತಿದೆ. ಆಡಳಿತ ಮಂಡಳಿ ಸಮಸ್ಯೆ ಬಗೆಹರಿಸದೇ ನಿರ್ಲಕ್ಷ್ಯ ವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.