ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷಕ್ಕೆ ಬರುವವರಿಗೆ ಸ್ವಾಗತ: ಶೆಟ್ಟರ್‌

Last Updated 30 ಆಗಸ್ಟ್ 2017, 6:42 IST
ಅಕ್ಷರ ಗಾತ್ರ

ಬೀದರ್‌: ಭಾಲ್ಕಿ ಪಟ್ಟಣಕ್ಕೆ ಸೋಮವಾರ ಭೇಟಿ ನೀಡಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ್‌ ಶೆಟ್ಟರ್ ಅವರು ಈಚೆಗೆ ಬಿಜೆಪಿಗೆ ಸೇರ್ಪಡೆಯಾದ ಉದ್ಯಮಿ ಗುರುನಾಥ ಕೊಳ್ಳೂರ್ ಅವರನ್ನು ಸನ್ಮಾನಿಸಿದರು.

‘ಪಕ್ಷದ ಸಂಘಟನೆ ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಕ್ರಿಯಾಶೀಲವಾಗಿ ಕೆಲಸ ಮಾಡಬೇಕಿದೆ. ಪಕ್ಷದ ತತ್ವ, ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರುವವರಿಗೆ ಸ್ವಾಗತ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ರಘುನಾಥರಾವ ಮಲ್ಕಾಪುರೆ, ಮಾಜಿ ಶಾಸಕರಾದ ಪ್ರಕಾಶ ಖಂಡ್ರೆ, ಸುಭಾಷ ಕಲ್ಲೂರ್, ಪ್ರಮುಖರಾದ ಶಿವರಾಜ ಗಂದಗೆ, ಬಾಬು ವಾಲಿ, ಪದ್ಮಾಕರ ಪಾಟೀಲ್, ಗೋವಿಂದರಾವ ಬಿರಾದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT