‘ಮಳೆಯಿಂದ ಮನೆಗೆ ಚರಂಡಿನೀರು ನುಗ್ಗಿ ತೊಂದರೆಯುಂಟಾಯಿತು. ಬಳಿಕ, ಮನೆಯವರೆಲ್ಲ ಸೇರಿ ಕೊಳಚೆ ನೀರನ್ನು ಹೊರಚೆಲ್ಲುವಂತಾಯಿತು. ಈ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು, ಸದಸ್ಯರುಗಳಿಗೆ ದೂರು ನೀಡಿದ್ದೇನೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಗ್ರಾಮದ ನಿವಾಸಿ ಪಾಪಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.