ಕಳೆದೊಂದು ದಶಕದಿಂದ ರಸ್ತೆ ದುರಸ್ತಿ ಆಗಿಲ್ಲ. ಶೀಘ್ರವೇ ರಸ್ತೆ ಅಭಿವೃದ್ಧಿ ಪಡಿಸದಿದ್ದರೆ ತೀವ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ರೈತ ಸಂಘದ ಕಾರ್ಯಕರ್ತರು, ಸಾರ್ವಜನಿಕರು, ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬಸವಾಪಟ್ಟಣ ಹಳೇ ಸಂತೆ ಮೈದಾನದ ಬಳಿ ರಸ್ತೆ ಗುಂಡಿ ಬಿದ್ದ ಸ್ಥಳದಲ್ಲಿ ಸೋಮವಾರ ಸಂಜೆ ಸಾರ್ವಜನಿಕರು ಕಲ್ಲುಗಳನ್ನು ಇಟ್ಟು ಪ್ರತಿಭಟನೆ ನಡೆಸಿದರು.